Veerakesari 01:57
loading...
ಚೆನ್ನೈನ ಮರೀನಾ ಕಡಲ ಕಿನಾರೆಯಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿರುವ ಜಲ್ಲಿಕಟ್ಟು ಪರ ಪ್ರತಿಭಟನೆ ಇಂದು ಇನ್ನೊಂದು ಆಯಾಮ ಪಡೆದುಕೊಂಡಿದೆ. ಇಷ್ಟು ದಿನ ಶಾಂತರೂಪದಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಹತ್ತಿಕ್ಕಲು ಯಾವುದೋ ಗುಂಪು ಇಂದು ಪೋಲೀಸ್ ಠಾಣೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಪೋಲೀಸ್ ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ಯತ್ನಿಸುತ್ತಿದೆ.
ಚೆನ್ನೈ ಪೋಲೀಸರು ಕೂಡ ಇದು ವಿದ್ಯಾರ್ಥಿಗಳ ಕೃತ್ಯವಲ್ಲ, ವಿದ್ಯಾರ್ಥಿಗಳು ಕಳೆದೊಂದು ವಾರದಿಂದ ಶಾಂತರೀತಿಯಲ್ಲಿಯೇ ಪ್ರತಿಭಟನೆ ಮಾಡುತ್ತಿದ್ದು ಈ ರೀತಿ ಮಾಡಲು ಸಾಧ್ಯವಿಲ್ಲ.  ಇದು ಖಂಡಿತವಾಗಿಯೂ ದೇಶದ್ರೋಹಿಗಳ ಕೃತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆಗೆ ಸಾಥ್ ನೀಡಿದ ಮೀನುಗಾರರು :
ಇನ್ನು ವಿದ್ಯಾರ್ಥಿಗಳ ಪ್ರತಿಭಟನೆಗೆ ಚೆನ್ನೈನ ಮೀನುಗಾರರು ಬೆಂಬಲ ನೀಡಲು ಮುಂದಾಗಿದ್ದು, ಇಂದಿನಿಂದ ಪ್ರತಿಭಟನಾಕಾರರೊಂದಿಗೆ ಸೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.
loading...

Post a Comment

Powered by Blogger.