loading...
ಮಂಗಳೂರಿನ ಬೆಳ್ತಂಗಡಿಯಲ್ಲಿ ಅಕ್ರಮ ಕಸಾಯಿಖಾನೆ ಮೇಲೆ ದಾಳಿ, ಇಬ್ಬರ ಬಂಧನ. ಕಳೆದ ಕೆಲ ವರ್ಷಗಳಿಂದ ಸದ್ದಿಲ್ಲದೆ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆ.ರೇಖ್ಯಾ ಗ್ರಾಮದ ಕಾಯರ್ತೋಡಿ ಎಂಬಲ್ಲಿನ ಕಸಾಯಿಖಾನೆ.
ಮಂಗಳವಾರ ಸಂಜೆ ಪೋಲೀಸರಿಗೆ ಮಾಹಿತಿ ನೀಡಿ ಕಾರ್ಯಾಚರಣೆ ನಡೆಸಿದ ರೇಖ್ಯಾ ಅರಸಿನಮಕ್ಕಿ ಶಿಶಿಲಾ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತಿಬ್ಬರು ಆರೋಪಿಗಳು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.
ಸ್ಥಳದಲ್ಲಿ ಗಬ್ಬದ ಹಸುವಿನ ಕಳೇಬರ ಪತ್ತೆಯಾಗಿದ್ದು. ಬಂಧಿತರನ್ನು 53ವರ್ಷದ ಬಾಬು ಮಾಥ್ಯೂ ಹಾಗೂ 50ವರ್ಷದ ಪ್ರಕಾಶ್ ಮಾಥ್ಯೂ ಎಂದು ಗುರುತಿಸಲಾಗಿದೆ. ದಾಳಿ ವೇಳೆ ಆರೋಪಿಗಳು ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Source - ನಮ್ಮ ಟಿವಿ
loading...
Post a Comment