Veerakesari 06:22

loading...

ಭಾರತದ ಜ್ಯೋತಿರ್ಲಿಂಗ ದೇವಾಲಯಗಳು

ಸೋಮನಾಥ :
12 ಜ್ಯೋತಿರ್ಲಿಂಗಗಳಲ್ಲಿ ಗುಜರಾತ್ ನ ಸೋಮನಾಥದಲ್ಲಿರುವ ದೇವಾಲಯವನ್ನು ಚಿರಂತನ, ಅಮರ ದೇಗುಲ' ಎಂದೂ ಕರೆಯಲ್ಪಡುತ್ತದೆ.
ಮಲ್ಲಿಕಾರ್ಜುನ :
ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ನಂದಿಕೊಟಕೂರು ತಾಲೂಕಿನ ನಲ್ಲಮಲೈ ಪರ್ವತ ಶ್ರೇಣಿಯ ದಟ್ಟ ಕಾನನದ ಮಧ್ಯದಲ್ಲಿ ಕೃಷ್ಣಾನದಿಯ ದಕ್ಷಿಣ ಭಾಗದಲ್ಲಿರುವ ಪ್ರಸಿದ್ಧ ಶೈವ ಕ್ಷೇತ್ರವೇ ಶ್ರೀಶೈಲ ಮಲ್ಲಿಕಾರ್ಜುನ. ಇಲ್ಲಿ ಹರಿಯುವ ಕೃಷ್ಣಾ ನದಿಯು ಆಳವಾದ ಕಮರಿಯಲ್ಲಿ ಹರಿದು ಬರುವುದರಿಂದ ತುಂಬಾ ರುದ್ರ ಭಯಾನಕವಾಗಿದೆ. ಇದನ್ನೇ ಪಾತಾಳ ಗಂಗೆ ಎಂದು ಕರೆಯುತ್ತಿದ್ದರು.
ಮಹಾಕಾಳೇಶ್ವರ :
ಶ್ರೀ ಮಹಾಕಾಳೇಶ್ವರ ಜ್ಯೋತಿರ್ಲಿಂಗವು ಮಧ್ಯಪ್ರದೇಶ ದ ಉಜ್ಜಯಿನಿ ಜಿಲ್ಲೆಯಯಲ್ಲಿದೆ. ಉಜ್ಜಯನಿ ಬಹಳ ಪುರಾತನವಾದ ಐತಿಹಾಸಿಕ ಮಹತ್ವ ಉಳ್ಳ ನಗರ. ಅದು ಕ್ಷಿಪ್ರಾನದಿಯ ದಡದ ಮೇಲಿದೆ. ಮಂದಿರದ ಒಳಗಡೆ ಅನೇಕ ದೇವ ದೇವಿಯರ ಮೂರ್ತಿಗಳಿವೆ. ದುರ್ಗ, ಅನ್ನಪೂರ್ಣೇಶ್ವರಿ, ಗಣಪತಿ, ಕಾರ್ತಿಕೇಯ ಮೊದಲಾದವು. 
ಓಂಕಾರೇಶ್ವರ :
ಶ್ರೀ ಓಂಕಾರೇಶ್ವರ ಜ್ಯೋತಿರ್ಲಿಂಗ ದೇವಾಲಯ ಮಧ್ಯಪ್ರದೇಶದಲ್ಲಿ ನರ್ಮದಾ ನದಿಯ ದಡದ ಹತ್ತಿರದ ದ್ವೀಪದ ಮೇಲಿದೆ . ಇಲ್ಲಿ ನರ್ಮದಾ ನದಿಯು ತನ್ನ ಇನ್ನೊಂದು ಸಣ್ಣ ಉಪನದಿಯೊಡನೆ ಸಂಗಮವಾಗುವ ಸ್ಥಳ. ದೇವಾಲಯವು ಮಧ್ಯದಲ್ಲಿರುವ ಮಾಂಧಾತ ಅಥವಾ ಶಿವಪುರಿ ಎಂದು ಕರೆಯಲ್ಪಡುವ ದ್ವೀಪದಲ್ಲಿದೆ. ಈ ದ್ವೀಪವು ಓಂ (ಸಂಸ್ಕೃತ) ಕಾರದ ರೂಪದಲ್ಲಿರುವುದರಿಂದ ಈ ಹೆಸರು ಬಂದಿದೆ. ಓಂ ಕಾರದ ಅಧಿದೇವತೆ ಎಂದು ಅರ್ಥ. ಇದು ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದು.
ಭೀಮಾಶಂಕರ :
ಭೀಮಾಶಂಕರ ಇದು ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದು. ಈ ಜ್ಯೋತಿರ್ಲಿಂಗವು ಮಹಾರಾಷ್ಟ್ರ ರಾಜ್ಯದ ಪುಣೆ ಜಿಲ್ಲೆಯ ಖೇಡ್ ತಾಲೂಕಿನ ಸಹ್ಯಾದ್ರಿ ಪರ್ವತ ಶ್ರೇಣಿಯ ಘಟ್ಟ ಪ್ರದೇಶದಲ್ಲಿದೆ. ಭೀಮಾಶಂಕರ ಇದು ಭೀಮಾ ನದಿಯ ಉಗಮ ಸ್ಥಾನವಾಗಿದೆ, ಈ ನದಿಯು ಕೃಷ್ಣಾ ನದಿಯ ಉಪನದಿಯಾಗಿದ್ದು, ಕೃಷ್ಣೆಯನ್ನು ರಾಯಚೂರಿನ ಬಳಿ ಸೇರುತ್ತದೆ.
ತ್ರ್ಯಂಬಕೇಶ್ವರ :
ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯ ತ್ರಿಂಬಕ್ ಪಟ್ಟಣದಲ್ಲಿರುವ ತ್ರ್ಯಂಬಕೇಶ್ವರವು ದೇವಾಲಯ 12 ಜ್ಯೋತಿರ್ಲಿಂಗಗಳಲ್ಲಿ ಒಂದು.
ರಾಮೇಶ್ವರ :
ತಮಿಳುನಾಡಿನ ರಾಮೇಶ್ವರಮ್ ನಲ್ಲಿರುವ ರಾಮನಾಥೇಶ್ವರ ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದು. ಶಿವನನ್ನು ಇಲ್ಲಿ ರಾಮನಾಥೇಶ್ವರನಾಗಿ ಪೂಜಿಸಲಾಗುತ್ತಿದೆ. ರಾಮೇಶ್ವರಮ್ ದ ರಾಮನಾಥೇಶ್ವರ ಮತ್ತು ಕಾಶಿಯ ವಿಶ್ವನಾಥರನ್ನು ಜೀವನದಲ್ಲಿ ಒಮ್ಮೆಯಾದರೂ ದರ್ಶನ ಮಾಡಬೇಕೆಂದು ಹೇಳಲಾಗುತ್ತದೆ. ಇವೆರಡೂ ಹಿಂದುಗಳಿಗೆ ಅತಿ ಪವಿತ್ರ ಸ್ಥಳಗಳು. 
ಘೃಶ್ನೇಶ್ವರ :
ಮಹಾರಾಷ್ಟ್ರದ ಶ್ರೀ ಘೃಶ್ನೇಶ್ವರ ಜ್ಯೋತಿರ್ಲಿಂಗವು ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದು . ಇದು ಮಹಾರಾಷ್ಟ್ರದ ಔರಂಗಾಬಾದಿನಿಂದ ೩೦ ಕಿ.ಮೀ., ವೆರೂಲಿನಿಂದ ೧೧ ಕಿ.ಮೀ.ದೂರದಲ್ಲಿದೆ. ಎಲ್ಲೋರಾ ಗುಹೆಗಳ ಅರ್ಧ ಕಿ.ಮೀ. ನಷ್ಟು ಸಮೀಪದಲ್ಲಿದೆ. ದೇವಾಲಯ ಬಹಳ ವಿಶಾಲವಾಗಿ ಭವ್ಯವಾಗಿದೆ. ಪುರಾತನ ಶೈಲಿಯ ಕೆತ್ತನೆಯಿಂದ ಕೂಡಿದೆ. ಪ್ರತಿಯೊಂದು ಕಲ್ಲೂ ಕೆತ್ತನೆಯಿಂದ ಕೂಡಿದೆ. ಆವರಣದಲ್ಲಿ ಸುಂದರವಾದ ಕೊಳವಿದೆ. ಕೆಂಪು ಕಲ್ಲಿನಿಂದ ನಿರ್ಮಿತವಾದ ದೇವಾಲಯ, ಐದು ಅಂತಸ್ತುಗಳುಳ್ಳ ಶಿಖರಹೊಂದಿದೆ. 
ಕಾಶಿ ವಿಶ್ವೇಶ್ವರ :
ವಾರಣಾಸಿಯ ಅಥವಾ ಕಾಶಿಯ ಶ್ರೀ ವಿಶ್ವನಾಥ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದು. ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಅತ್ಯಂತ ಪ್ರಸಿದ್ಧವಾದುದು. ಬಹಳ ಪ್ರಾಚೀನ ಮತ್ತು ಶ್ರೀಮಂತ ದೇವಾಲಯ. ಇಲ್ಲಿಯ ಕಾಶೀವಿಶ್ವನಾಥ ಜ್ಯೋತಿರ್ಲಿಂಗ ಪ್ರಸಿದ್ಧವೋ ಹಾಗೇ ಕಾಶಿಯು ಭಾರತ ಸಂಸ್ಕೃತಿ ಯ ಪ್ರತೀಕವೂ ಆಗಿದೆ. ಈ ಕಾಶಿಯಲ್ಲಿ ಅತ್ಯಂತ ಪವಿತ್ರ ಗಂಗಾ ನದಿ ಹರಿಯುವುದರಿಂದ ಭಕ್ತರು ಗಂಗೆಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆಯಬಹುದು.
ನಾಗೇಶ್ವರ :
ಮಹಾರಾಷ್ತ್ರದ 'ಅವುನ್ಧ'ದಲ್ಲಿರುವ ನಾಗನಾಥ ಜ್ಯೋತಿರ್ಲಿಂಗಗಳಲ್ಲಿ ಹತ್ತನೆಯದ್ದಾಗಿದೆ. 
ವೈದ್ಯನಾಥ :
ಶ್ರೀ ವೈದ್ಯನಾಥ ಜ್ಯೋತಿರ್ಲಿಂಗವು ಜಾರ್ಖಂಡ್ ನ ಸಂಥಾಲ್ ಜಿಲ್ಲೆಯಲ್ಲಿದೆ. ದೇವಾಲಯದ ಸುತ್ತಲೂ ಅನೇಕ ಚಿಕ್ಕ ಚಿಕ್ಕ ಮಂದಿರಗಳಿವೆ. ಶ್ರೀ ಗೌರೀ ಮಾತಾ ಮಂದಿರ ಮುಖ್ಯವಾದುದು. ಒಂದೇಪೀಠದ ಮೇಲೆ ಶ್ರೀದುರ್ಗಾ ಮತ್ತು ತ್ರಿಪುರಸುಂದರಿ ಎಂದು ಕರೆಯಲ್ಪಡುವ ಎರಡು ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದಾರೆ. ಈ ದುರ್ಗಾ ತ್ರಿಪುರಸುಂದರಿ ಮೂರ್ತಿಗಳು ಬಹಳ ಸುಂದರವಾಗಿವೆ. ಶ್ರೀ ವೈದ್ಯನಾಥ ಜ್ಯೋತಿರ್ಲಿಲಿಂಗ ದರ್ಶನದಿಂದ ಸಂಸಾರಿಕ ಕಷ್ಟ-ಕೋಟೆಲೆಗಳೆಲ್ಲಾ ತಪ್ಪಿ , ಮಾನಸಿಕ ಶಾಂತಿ ದೊರೆಯುವುದೆಂದು ಭಕ್ತರ ನಂಬುಗೆ. 
ಕೇದಾರನಾಥ :
ಜ್ಯೋತಿರ್ಲಿಂಗಗಳಲ್ಲಿ ಒಂದಾಗಿರುವ ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಇದು ಹಿಮಾಲಯ ಪರ್ವತ ಶ್ರೇಣಿಯಲ್ಲಿ ಉತ್ತರಾಖಂಡ ರಾಜ್ಯದ ಚಮೋಲಿ (ಉತ್ತರಕಾಶಿ) ಜಿಲ್ಲೆಯಲ್ಲಿ ಮಂದಾಕಿನಿ ನದಿಯ ದಂಡೆಯ ಮೇಲಿರುವ ಶಿವನ ದೇವಾಲಯ. ಕೇದಾರನಾಥದಲ್ಲಿ ಮೂಲ ದೇವಾಲಯವು ಕಲ್ಲಿನ ಸುಂದರ ಶಿಲ್ಪವಾಗಿದ್ದು ಇದನ್ನು ಸುಮಾರು ೮ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ಸ್ಥಾಪಿಸಿದರೆಂದು ಹೇಳಲಾಗುತ್ತಿದೆ. ಇದು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲೊಂದು.

Kannada Prabha
loading...

Post a Comment

Powered by Blogger.