Veerakesari 17:46
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೊಂದು ಸಿಹಿ ಸುದ್ದಿ. ಶಬರಿಮಲೆ ದೇವಸ್ಥಾನಕ್ಕೆ ಬರುವ ಲಕ್ಷಾಂತರ ಯಾತ್ರಿಕರ ಅನುಕೂಲಕ್ಕಾಗಿ ಶಬರಿಮಲೆಯಿಂದ 48 ಕಿ.ಮೀ.ದೂರದಲ್ಲಿ ವಿಮಾನ ನಿಲ್ದಾಣಕ್ಕೆ ನಿರ್ಮಾಣ ಪ್ರಸ್ತಾವಕ್ಕೆ ಕೇರಳ ಸಚಿವ ಸಂಪುಟ ಬುಧವಾರ ಅನುಮತಿ ನೀಡಿದೆ.
ಶಬರಿಮಲೆ ದೇವಸ್ಥಾನದಿಂದ 48 ಕಿ.ಮೀ. ದೂರದಲ್ಲಿರುವ ಎರುಮಲೆಯ ಹರಿಸನ್ಸ್ ಪ್ಲಾಂಟೆಷನ್ಸ್ ನ ಚೆರುವ್ಯಾಲಿ ಎಸ್ಟೇಟ್ ನಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಪ್ರಸ್ತೂತ ಯಾತ್ರಿಕರು ರಸ್ತೆ ಮಾರ್ಗವಾಗಿ ಮಾತ್ರವೇ ಶಬರಿಮಲೆಗೆ ಹೋಗಬಹುದಾಗಿದೆ. ಇತ್ತೀಚಿಗೆ ಶಬರಿಮಲೆಗೆ ಹೋಗುವ ಯಾತ್ರಿಕರ ಸಂಖ್ಯೆ ಗಮನಾರ್ಹವಾಗಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಯಾತ್ರಿಕರ ಅನುಕೂಲಕ್ಕಾಗಿ ಕೇರಳ ಸರ್ಕಾರ ಕೊಟ್ಟಾಯಂ ಜಿಲ್ಲೆಯ ಕಂಜಿರಪಾಳ್ಯ ತಾಲೂಕಿನಲ್ಲಿ ಸುಮಾರು 2,263 ಎಕರೆ ಜಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಮುಂದಾಗಿದೆ.
Source - Kannada Prabha
loading...

Post a Comment

Powered by Blogger.